Saturday, August 16, 2025

ಪ್ರಥಮ ವಚನ ಪಾಠಶಾಲೆ ಉದ್ಘಾಟನೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಪ್ರವಚನ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮ

 ದೇವಲಾಪುರ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದಲ್ಲಿ ಮೈಸೂರು ಜಿಲ್ಲೆಯಲ್ಲಿಯೇ ಪ್ರಥಮ ವಚನ ಪಾಠಶಾಲೆ ಉದ್ಘಾಟನೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಪ್ರವಚನ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮ




ಮೈಸೂರು ಜಿಲ್ಲೆ ದೇವಲಾಪುರ ಶ್ರೀ ಗುರುಮಲ್ಲೇಶ್ವರ ಮಠದಲ್ಲಿ ೧೮ ಆಗಸ್ಟ್ ೨೦೨೫ರಂದು ಸಂಜೆ ೬.೩೦ಕ್ಕೆ ಮೈಸೂರು ಜಿಲ್ಲೆಯಲ್ಲಿ ಪ್ರಥಮ ವಚನ ಪಾಠಶಾಲೆ ಉದ್ಘಾಟನೆ ಮತ್ತು ಶ್ರಾವಣ ಮಾಸದ ಪ್ರಯುಕ್ತ ಪ್ರವಚನ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

ದೇವನೂರು ಶ್ರೀ ಗುರುಮಲ್ಲೇಶ್ವರ ತ್ರಿವಿಧ ದಾಸೋಹ ಮಠಾಧ್ಯಕ್ಷರಾದ ಶ್ರೀ ಮಹಾಂತಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸಲಿದ್ದು, ಬರಡನಪುರ ಶ್ರೀ ಮಹಾಂತೇಶ್ವರ ಮಠದ ಶ್ರೀ ಪರಶಿವಮೂರ್ತಿಸ್ವಾಮಿಗಳು ದಿವ್ಯಸಮ್ಮುಖ ವಹಿಸಲಿದ್ದಾರೆ. ಮೈಸೂರು ವಿ.ವಿ ಗಣಕ ವಿಜ್ಞಾನ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಡಿ.ಎಸ್ ಗುರು ಪ್ರವಚನ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ವಚನ ಕುಮಾರಸ್ವಾಮಿ ಶರಣರ ವಿಚಾರ ಧಾರೆ ಬಗ್ಗೆ ಪ್ರವಚನ ನೀಡಲಿದ್ದಾರೆ. ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕಿ ರೂಪ ಕುಮಾರಸ್ವಾಮಿ ವಚನ ಪಾಠಶಾಲೆ ಉದ್ಘಾಟಿಸಲಿದ್ದಾರೆ. ೧೮ ಆಗಸ್ಟ್ ೨೦೨೫ರಿಂದ ೨೨ ಆಗಸ್ಟ್ ೨೦೨೫ರವರೆಗೆ ಪ್ರತಿದಿನ ಸಂಜೆ ೬.೩೦ಕ್ಕೆ ಪ್ರವಚನ ಕಾರ್ಯಕ್ರಮ ಇರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸದಭಕ್ತರು ಆಗಮಿಸಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕೆಂದು ದೇವಲಾಪುರ ಶ್ರೀ ಗುರುಮಲ್ಲೇಶ್ವರ ಮಠದ ಶ್ರೀ ಜಡೇಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


No comments:

Post a Comment